swatantra siddalingeshwara vachana collection ಸ್ವತಂತ್ರ ಸಿದ್ಧಲಿಂಗನ ವಚನಗಳು
ತೋಂಟದ ಸಿದ್ಧಲಿಂಗರ ಶಿಷ್ಯ ಪರಂಪರೆಗೆ ಸೇರಿದ ಮತ್ತೊಬ್ಬ ವಚನಕಾರ ಸ್ವತಂತ್ರ ಸಿದ್ಧಲಿಂಗ. ಕಾಲ ೧೬ನೇಯ ಶತಮಾನದ ಉತ್ತರಾರ್ಧ. ಸ್ಥಳ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನ ಕಾಪನಹಳ್ಳಿ. ಅಚರ ಸಮೀಪದ ‘ಗಜರಾಜಗಿರಿ’ ಈತನ ಶಿವಯೋಗ ಸಾಧನೆಯ ಸ್ಥಾನ. ಅಲ್ಲಿಯೇ ಐಕ್ಯ. ಸದ್ಯ ಈತನ ೪೩೦ ವಚನಗಳು ದೊರೆತಿವೆ. ‘ನಿಜಗುರುಸ್ವತಂತ್ರಸಿದ್ಧಲಿಂಗೇಶ್ವರ’ ಎಂಬುದು ಅಂಕಿತ. ಜಂಗಮರಗಳೆ, ಮುಕ್ತ್ಯಾಂಗನಾ ಕಂಠಮಾಲೆ ಎಂಬ ಕೃತಿಗಳನ್ನು ರಚಿಸಿದ್ದಾನೆ. ಆರು ಸ್ಥಲಗಳಲ್ಲಿ ಹಂಚಿಕೊಂಡಿರುವ ಈತನ ವಚನಗಳಲ್ಲಿ ಷಟ್-ಸ್ಥಲ ತತ್ವ ನಿರೂಪಣೆ ಮುಖ್ಯ ವಸ್ತುವಾಗಿದೆ. ಸಾಂಪ್ರದಾಯಿಕ ರೀತಿಯಲ್ಲಿ ಸಕ್ರಮವಾಗಿ ತತ್ವ ಪ್ರತಿಪಾದನೆ ಮಾಡಿದ್ದಾನೆ. ಮಹಾದೇವಿಯಕ್ಕ ಬಸವಣ್ಣ ಮೊದಲಾದ ವಚನಕಾರರಿಂದ ಪ್ರಭಾವಿತನಾಗಿದ್ದಾನೆ. ಬಸವಣ್ಣ, ಮಡಿವಾಳ ಮಾಚಿದೇವ, ಚನ್ನ ಬಸವಣ್ಣ, ಪ್ರಭುದೇವ, ಅಜಗಣ್ಣ ಇವರೆಲ್ಲ ತನಗೆ ಷಡುಸ್ಥಲವನ್ನಿತ್ತರೆಂದು ಹೇಳಿರುವನು. ನಿರೂಪಣೆಗೆ ಒಳ್ಳೆಯ ದೃಷ್ಟಾಂತಗಳನ್ನು ಬಳಸಿಕೊಳ್ಳುವುದರಿಂದ ವಚನಗಳು ಕಾವ್ಯಕಮನೀಯತೆಯಿಂದ ಕಂಗೊಳಿಸುತ್ತವೆ.
For any issues / concerns / feedback please reach out to us at vishaya.in@gmail.com OR contact form in https://vishaya.in
আপডে’ট কৰা তাৰিখ
২৪-০৪-২০২৩