ಚೀನೀ ಯಾತ್ರಿಕ ಹುಯೆನ್ ತ್ಸಾಂಗ್ ಸಾಗಿಬಂದಿದ್ದ ಹಾದಿಯಲ್ಲಿ ಭಿನ್ನ ಸಾಮಾಜಿಕ ಹಿನ್ನೆಲೆಯ ಮೂವರು ಮಿತ್ರರು (ಒಬ್ಬ ಚೀನೀ, ಭಾರತೀಯ ಮತ್ತು ಒಬ್ಬ ಅಮೆರಿಕನ್) ಪ್ರವಾಸ ಕೈಗೊಂಡು ಚೈನಾ-ಭಾರತ, ಇತಿಹಾಸ-ವರ್ತಮಾನ, ಕಮ್ಯುನಿಸ್ಟ್-ಪ್ರಜಾಪ್ರಭುತ್ವ, ಮತ್ತು ಜನಾಶಯ-ನಿರಾಶಯಗಳನ್ನು ವಿಶ್ಲೇಷಣೆಗೊಳಪಡಿಸಿ ಅನಾವರಣಗೊಳಿಸುವುದರೊಂದಿಗೆ ಪ್ರವಾಸದ ರಸಾಸ್ವಾದಗಳ ಅನುಭವವನ್ನೂ ಮೇಳೈಸಿಕೊಂಡು ಸಮ್ಮಿಳಿತಗೊಂಡಿರುವ ಕೃತಿ, ವೂಶಿಯನ್ ಡಿ ಲ್ಯುಲಾಂಗ್ಚ, ಯಾನೆ ಅಗಣಿತ ಅಲೆಮಾರಿ ಉರ್ಫ್ The Infinite Wanderer!
ಚೈನಾದ ಕಮ್ಯುನಿಸ್ಟ್ ಸರ್ಕಾರ ಹೇಗೆ ತನ್ನ ಸಿದ್ಧಾಂತಕ್ಕೆ ತದ್ವಿರುದ್ಧವಾಗಿ ಬಂಡವಾಳಶಾಹಿಯಾಗಿದೆ ಮತ್ತು ಭಾರತದ ಸಾಂವಿಧಾನಿಕ ಮೂಲಭೂತ ಹಕ್ಕುಗಳು ಮೂಲಭೂತವಾಗಿಯೇ ಹೇಗೆ ಅನುಷ್ಠಾನದಲ್ಲಿ ಚ್ಯುತಿಗೊಂಡು ಅಸಂವಿಧಾನಿಕವಾಗಿವೆ ಎಂದು ವಾಸ್ತವ ಘಟನೆಗಳ ಮೂಲಕ ತೆರೆದಿಡುತ್ತ ಚಿಂತನೆಗೆ ಹಚ್ಚುವ ಕೃತಿ ಇದಾಗಿದೆ.
ಈ ಎಲ್ಲಾ ಹಿನ್ನೆಲೆಯಲ್ಲಿ ಚೈನಾದ ಅಭಾಸಗಳನ್ನು, ಭಾರತದ ವಿಪರ್ಯಾಸಗಳನ್ನು ಆಯಾಯ ದೇಶಗಳ ಸೈದ್ಧಾಂತಿಕ ಆಡಳಿತ ವ್ಯವಸ್ಥೆಯ ಪರಿಮಿತಿಯಲ್ಲೇ ತೆರೆದಿಡುವ ಕನ್ನಡದ ಏಕೈಕ ಕೃತಿ, ಅಗಣಿತ ಅಲೆಮಾರಿ (ವೂಶಿಯನ್ ಡಿ ಲ್ಯೂಲಾಂಗ್ಚ)!
“This book was produced with ePustaka - Ink and Weave initiative by Techfiz Inc. (https://techfiz.com) Reach us via info@techfiz.com.”
ದಾವಣಗೆರೆ ಮೂಲದ ಶಿಕಾಗೋ ವಾಸಿ ರವಿ ಹಂಜ್ ಅವರು ಮೂಲತಃ ಮ್ಯಾನೇಜ್ಮೆಂಟ್ ತಜ್ಞರು. ಹವ್ಯಾಸವಾಗಿ ಬ್ಲಾಗು ಬರಹದಿಂದ ಆರಂಭಗೊಂಡ ಅವರ ಸಾಹಿತ್ಯ ಕೃಷಿ "ಹುಯೆನ್ ತ್ಸಾಂಗನ ಮಹಾಪಯಣ" ಎಂಬ ಗಮನಾರ್ಹ ಕೃತಿಯನ್ನು ರಚಿಸುವಲ್ಲಿಗೆ ದಾಪುಗಾಲು ಹಾಕಿ ಈಗ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ತಮ್ಮ ಈ ಕೃತಿಗೆ ಪಡೆದುಕೊಂಡಿದ್ದಾರೆ.
ಸೃಜನೇತರ ಸಾಹಿತ್ಯ ಮತ್ತು ಸಂಶೋಧನೆಯೆಡೆಗೆ ಆಕರ್ಷಿತರಾಗಿರುವ ಇವರು ಇತ್ತೀಚೆಗೆ "ಭಾರತ ಒಂದು ಮರುಶೋಧನೆ" ಎಂಬ ಮತ್ತೊಂದು ಕೃತಿಯನ್ನು ಬರೆದಿದ್ದಾರೆ. ಅದಲ್ಲದೆ ಪೂರ್ಣಚಂದ್ರ ತೇಜಸ್ವಿಯವರ "ಜುಗಾರಿ ಕ್ರಾಸ್", "ಪರಿಸರದ ಕತೆ" ಕೃತಿಗಳನ್ನು ಇಂಗ್ಲಿಷಿಗೆ ಅನುವಾದಿಸಿದ್ದಾರೆ.
ತಮ್ಮ ಪ್ರಾಥಮಿಕ ಶಿಕ್ಷಣವನ್ನು ದಾವಣಗೆರೆಯ ಸಂಗಮೇಶ್ವರ ಪಾಠಶಾಲೆ, ಸಿಟಿ ಮಿಡ್ಲ್ ಸ್ಕೂಲ್, ಮತ್ತು ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಓದಿರುವ ಇವರು ಹಾಸನದ ಮಲ್ನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಂದ ಎಂ.ಸಿ.ಎ ಪದವಿ ಗಳಿಸಿದ್ದಾರೆ.