Ajji Kareda Haagaayitu: ಅಜ್ಜಿ ಕರೆದ ಹಾಗಾಯಿತು: ಕತೆಗಳು

Akshara Prakashana
Ebook
60
Pages

About this ebook

ತಮ್ಮ ಕಥೆಗಳ ಮೂಲಕ ಈ ಲೋಕದ ಬಾಲ್ಯಗಳನ್ನು ಬೆಳಗಿಸಿದ ಅಜ್ಜಮ್ಮಂದಿರ ಸಂಪ್ರದಾಯದಿಂದ ಪ್ರೇರಣೆ ಪಡೆದು, ಹೊಸಗಾಲದ ವಸ್ತು-ವಿಚಾರ-ವಿನ್ಯಾಸಗಳನ್ನು ಮನಸ್ಸಲ್ಲಿ ಇಟ್ಟುಕೊಂಡು ಕಟ್ಟಿದ ಮೂವತ್ತು ಕಿರು ಕಥನಗಳು ಇಲ್ಲಿವೆ. ಈ ಕತೆಗಳು ಒಂದೊಂದೂ ಬೇರೆ ಬಗೆಯದೇ ಆಗಿದ್ದರೂ ಇವುಗಳ ನಡುವೆ ಕೆಲವು ಸಾಮ್ಯಗಳೂ ಇವೆ. ಅಂಥ ಒಂದು ಸಮಾನ ಗುಣವೆಂದರೆ ಇಲ್ಲಿಯ ಬಹುತೇಕ ಕತೆಗಳು ಪುಟ್ಟ ಪುಟ್ಟ ಭಾವಗೀತೆಗಳ ಹಾಗಿವೆ. ಇವತ್ತಿನ ಕಾಲದೇಶಗಳಲ್ಲಿ ಇದ್ದೂ ಅದನ್ನು ಮೀರುವ ಹಾಗೂ ಹೇಳಬೇಕಾದ್ದನ್ನು ತಮ್ಮ ಎರಡು ಸಾಲಿನ ನಡುವಿನ ಮೌನದ ಮೂಲಕವೇ ಹೇಳುವ ಆಪ್ತ ಪ್ರಯೋಗ ಈ ಕಥೆಗಳಲ್ಲಿದೆ…

A Kannada book by Akshara Prakashana / ಅಕ್ಷರ ಪ್ರಕಾಶನ

About the author

ಸವಿತಾ ನಾಗಭೂಷಣ ಅವರು 11 ಮೇ 1961ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಿಸಿದರು. ಶಿವಮೊಗ್ಗಾದಲ್ಲಿ ಪದವಿ ಪೂರೈಸಿ ಅಂಚೆ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಅವರು ಮುಕ್ತವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಮಕಾಲೀನ ಕನ್ನಡ ಕಾವ್ಯದ ಪ್ರಮುಖರಲ್ಲೊಬ್ಬರೆಂದು ಪರಿಗಣಿತವಾಗಿರುವ ಇವರು 'ಸ್ತ್ರೀಲೋಕ' ಎಂಬ ವಿಶಿಷ್ಟ ರೂಪದ ಕಾದಂಬರಿಯನ್ನೂ ರಚಿಸಿದ್ದಾರೆ. 'ನಾ ಬರುತ್ತೇನೆ ಕೇಳು', 'ಚಂದ್ರನನ್ನು ಕರೆಯಿರಿ ಭೂಮಿಗೆ', 'ಹೊಳೆಮಗಳು', 'ಜಾತ್ರೆಯಲ್ಲಿ ಶಿವ', 'ದರುಶನ' - ಇವು ಇದುವರೆಗೆ ಪ್ರಕಟವಾಗಿರುವ ಅವರ ಕವನಸಂಕಲನಗಳು. 'ಆಕಾಶ ಮಲ್ಲಿಗೆ', 'ಕಾಡು ಲಿಲ್ಲಿ ಹೂವುಗಳು' - ಎಂಬ ಇವರ ಎರಡು ಕವಿತಾ ಸಂಕಲನಗಳೂ ಈವರೆಗೆ ಹೊರಬಂದಿವೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೀತಾ ದೇಸಾಯಿ ದತ್ತಿನಿಧಿ ಬಹುಮಾನ, ಎಂ.ಕೆ. ಇಂದಿರಾ ಪ್ರಶಸ್ತಿ, ಡಾ. ಡಿ.ಎಸ್. ಕರ್ಕಿ ಕಾವ್ಯಪ್ರಶಸ್ತಿ, ವಾರಂಬಳ್ಳಿ ಕಾವ್ಯಪ್ರಶಸ್ತಿ, ಬಿ.ಎಚ್. ಶ್ರೀಧರ ಸಾಹಿತ್ಯಪ್ರಶಸ್ತಿ ಮೊದಲಾದ ಹಲವು ಮನ್ನಣೆಗಳಿಗೆ ಪಾತ್ರರಾಗಿರುವ ಇವರು ಸದ್ಯ ಸ್ವಯಮಿಚ್ಛೆಯ ನಿವೃತ್ತಿ ಪಡೆದು ಶಿವಮೊಗ್ಗೆಯಲ್ಲಿ ನೆಲೆಸಿದ್ದಾರೆ.

Rate this ebook

Tell us what you think.

Reading information

Smartphones and tablets
Install the Google Play Books app for Android and iPad/iPhone. It syncs automatically with your account and allows you to read online or offline wherever you are.
Laptops and computers
You can listen to audiobooks purchased on Google Play using your computer's web browser.
eReaders and other devices
To read on e-ink devices like Kobo eReaders, you'll need to download a file and transfer it to your device. Follow the detailed Help Center instructions to transfer the files to supported eReaders.